ADVERTISEMENT

75 ವರ್ಷ ಮೇಲ್ಪಟ್ಟ ನಿವೃತ್ತ ನೌಕರರಿಗೆ ವಿಚಾರ ಸಂಕಿರಣ ಫೆ. 25ಕ್ಕೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 19:54 IST
Last Updated 20 ಫೆಬ್ರುವರಿ 2026, 19:54 IST
   

ಬೆಂಗಳೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ವಿಚಾರ ಸಂಕಿರಣ ಹಾಗೂ 75 ವರ್ಷ ಮೇಲ್ಪಟ್ಟ ನಿವೃತ್ತ ನೌಕರರಿಗೆ ಮತ್ತು ಕುಟುಂಬ ಪಿಂಚಣಿದಾರರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಕೇಂದ್ರ ಸಂಘವು ಫೆ.25ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಘ್‌ ಉದ್ಘಾಟಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಅಶೋಕ ಕೆ.ಎ.ಎಸ್., ಬೀದರ್‌ನ ಶಾಹೀನ್ ಗ್ರೂಪ್‌ ಆಫ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಕದೀರ್‌, ನಿವೃತ್ತ ಎಸ್‌ಪಿ ಬೆಟ್ಟೇಗೌಡ, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಸಿದ್ದರಾಜು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಡಾ.ಎಲ್.ಬೈರಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT