ADVERTISEMENT

ಪ್ರತ್ಯೇಕ ಅಪಘಾತ: ಸವಾರ ಸಾವು, ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 21:44 IST
Last Updated 27 ಜನವರಿ 2022, 21:44 IST

ಬೆಂಗಳೂರು: ನಗರದ ಎರಡು ಕಡೆ ಬುಧವಾರ ರಾತ್ರಿ ಅಪಘಾತವಾಗಿದ್ದು, ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿ ಹೊರಟಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.

'ಲಾಲ್‌ಬಾಗ್ ಉದ್ಯಾನದ ಪಶ್ಚಿಮ ದ್ವಾರದ ರಸ್ತೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಆಗಿದೆ. ಬೈಕ್ ಸವಾರ ಸುರೇಶ್‌ (36) ಎಂಬುವವರು ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು.

‘ಅಪಘಾತದ ನಂತರ, ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ‘ ಎಂದೂ ತಿಳಿಸಿದರು.

ADVERTISEMENT

ರಸ್ತೆ ವಿಭಜಕಕ್ಕೆ ಗುದ್ದಿದ ಕಾರು: ‘ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಇನ್ನೋವಾ ಕಾರೊಂದು ರಸ್ತೆ ವಿಭಜಕಕ್ಕೆ ಗುದ್ದಿ ಜಖಂಗೊಂಡಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮೂವರಿಗೆ ಗಾಯವಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.