ಬೆಂಗಳೂರು: ಹಲಸೂರು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಚಾಲಕರೊಬ್ಬರು ಮೃತಪಟ್ಟಿದ್ದಾರೆ.
‘ಮರ್ಸಿಡಿಸ್ ಬೆನ್ಜ್ ಕಾರಿನ ಚಾಲಕ, ಅತೀ ವೇಗವಾಗಿ ಚಾಲನೆ ಮಾಡಿದ್ದ. ಮಾರ್ಗಮಧ್ಯೆಯೇ ನಿಯಂತ್ರಣ ತಪ್ಪಿದ್ದು, ಎರಡು ಕಾರು, ಆಟೊ ಹಾಗೂ ಟಾಟಾ ಏಸ್ಗೆ ಬೆನ್ಜ್ ಕಾರು ಗುದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಬೆನ್ಜ್ ಕಾರು, ನಂದಿತಾ ಚೌಧರಿ ಎಂಬುವರಿಗೆ ಸೇರಿದ್ದು ಎಂದು ಗೊತ್ತಾಗಿದೆ. ನಜ್ಜುಗುಜ್ಜಾಗಿರುವ ಕಾರು, ಆಟೊ ಹಾಗೂ ಟಾಟಾ ಏಸ್ಗಳನ್ನು ಸ್ಥಳದಿಂದ ತೆರವು ಮಾಡಲಾಗಿದೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.