ADVERTISEMENT

ಶಬರಿಮಲೆ ವಿವಾದ ರಾಜಕೀಯಕ್ಕೆ ಬಳಕೆ: ಬಿಕೆಸಿ ಟೀಕೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2018, 19:31 IST
Last Updated 20 ನವೆಂಬರ್ 2018, 19:31 IST

ಬೆಂಗಳೂರು: ಶಬರಿಮಲೆ ವಿವಾದವನ್ನು ಚುನಾವಣಾ ರಾಜಕೀಯಕ್ಕೆ ಅನುಕೂಲವಾಗುವಂತೆ ಬಳಸಿಕೊಳ್ಳುವ ಪ್ರಯತ್ನಗಳು ಸಮಾನತೆ ವಿರುದ್ಧದ ನಿಲುವು ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಕೆ.ಚಂದ್ರಶೇಖರ್‌ ಹೇಳಿದ್ದಾರೆ.

‘ಶಬರಿಮಲೆ ದೇವಾಲಯ ಪ್ರವೇಶಕ್ಕೆ ಮಹಿಳೆಯರ ಮೇಲೆ ಸಂಪ್ರದಾಯದ ಹೆಸರಿನಲ್ಲಿ ನಿರ್ಬಂಧ ಹೇರುತ್ತಿರುವುದು ಸರಿಯಲ್ಲ. ಆಧುನಿಕ ಯುಗದಲ್ಲಿ ಲಿಂಗ ತಾರತಮ್ಯ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ನಮ್ಮ ರಾಜ್ಯದಲ್ಲಿಯೂ ಯಾವುದೇ ರೀತಿಯ ಲಿಂಗ ಅಸಮಾನತೆ ಉಂಟಾಗುವುದನ್ನು ನಾವೆಲ್ಲರೂ ವಿರೋಧಿಸಬೇಕು ಎಂದು ಸಿರಿಗೆರೆ ಡಾ.ಶಿವಮೂರ್ತಿ ಶಿವಾಚಾರ್ಯರು ಹೇಳಿರುವುದು ಸರಿಯಾಗಿಯೇ ಇದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT