ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನ ನೀಡುವ ‘ಕೆ.ವಿ.ಶಂಕರಗೌಡ ರಂಗಭೂಮಿ ಪ್ರಶಸ್ತಿ’ಗೆ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ರಂಗಕರ್ಮಿ ಕೆ.ವಿ. ನಾಗರಾಜಮೂರ್ತಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ಸುನೀಲ್ ಕುಮಾರ್ ಸಿಂಗ್ ಮತ್ತು ಕೃಷ್ಣ ಅರುಣಾಚಲಂ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.
ಇದೇ 12ರಂದು ಬೆಳಿಗ್ಗೆ 10.30ಕ್ಕೆ ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಂಸ್ಕೃತಿ ಪೋಷಕ ಕೆ. ಮೋಹನ್ದೇವ್ ಆಳ್ವ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.