ADVERTISEMENT

‘ಕೈ’ ಹಿಡಿಯುತ್ತೇನೆ: ಶರತ್ ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 21:54 IST
Last Updated 18 ಫೆಬ್ರುವರಿ 2021, 21:54 IST
   

ಬೆಂಗಳೂರು: ಕಾಂಗ್ರೆಸ್‌ ಸೇರಲು ನಿರ್ಧರಿಸಿರುವ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಶರತ್‌, ‘ಕಾಂಗ್ರೆಸ್ ಸೇರ್ಪಡೆ ಕುರಿತುಸುರ್ಜೆವಾಲಾ ಅವರನ್ನು ಭೇಟಿ ಮಾಡಿದ್ದೇನೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ, ಸೇರುವ ದಿನವನ್ನು ನಿಗದಿಪಡಿಸುತ್ತೇನೆ’ ಎಂದರು.

‘ಕಾಂಗ್ರೆಸ್ ಬಾವುಟ ಹಿಡಿದ ಬಳಿಕ ಕ್ಷೇತ್ರದಲ್ಲಿ ಪಕ್ಷದ ಸಮಾವೇಶ ಆಯೋಜಿಸುವ ಬಗ್ಗೆ ತೀರ್ಮಾನಿಸುತ್ತೇನೆ. ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ’ ಎಂದು ವಿವರಿಸಿದರು.

ADVERTISEMENT

ಫೆ. 26ರಂದು ಶರತ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ ಎಂದು ಆ ಪಕ್ಷದ ಮೂಲಗಳು ಖಚಿತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.