ಬೆಂಗಳೂರು: ರಂಗಸಂಪದ ಕಲಾ ತಂಡವು ಇದೇ 29ರಂದು ಮಧ್ಯಾಹ್ನ 3.30 ಮತ್ತು ಸಂಜೆ 7.30ಕ್ಕೆ ಜೆ.ಪಿ. ನಗರದ ರಂಗಶಂಕರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ ಹಮ್ಮಿ ಕೊಂಡಿದೆ.
ನಟಿ ಉಮಾಶ್ರೀ ಅವರು ಈ ನಾಟಕದಲ್ಲಿ ಅಭಿನಯಿಸಲಿದ್ದಾರೆ. ಬೇಲೂರು ರಘುನಂದನ್ ಅವರು ಈ ನಾಟಕ ರಚಿಸಿದ್ದು, ಚಿದಂಬರರಾವ್ ಜಂಬೆ ಅವರು ನಿರ್ದೇಶಿಸಿದ್ದಾರೆ. ಈ ನಾಟಕ ₹200 ಪ್ರವೇಶ ಶುಲ್ಕ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.