ADVERTISEMENT

ಶಿವಾಜಿನಗರ ಇನ್‌ಸ್ಪೆಕ್ಟರ್‌ ವಿರುದ್ಧ ಎಫ್‌ಐಆರ್

ವಿಚಾರಣೆ ನೆಪದಲ್ಲಿ ಹಲ್ಲೆ ಆರೋಪ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 22:36 IST
Last Updated 9 ಮಾರ್ಚ್ 2020, 22:36 IST

ಬೆಂಗಳೂರು: ಮಹಿಳೆಯೊಬ್ಬರಿಗೆ ಬೆದರಿಕೆಯೊಡ್ಡಿದ್ದ ಆರೋಪದಡಿ ವಿಚಾರಣೆಗೆ ಕರೆಸಿದ್ದ ವೇಳೆ ವಾಸೀಂ ಪಾಷ (35) ಎಂಬುವರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಶಿವಾಜಿನಗರ ಠಾಣೆ ಇನ್‌ಸ್ಪೆಕ್ಟರ್‌ ಸಿದ್ದರಾಜು ಹಾಗೂ ನಾಲ್ವರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ಠಾಣೆಗೆ ಕರೆಸಿ ವಿನಾಕಾರಣ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ಕೋರಿ ವಾಸೀಂ ಪಾಷ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಅಪರಾಧ ಸಂಚು (ಐಪಿಸಿ 34) ಹಾಗೂ ಹಲ್ಲೆ (ಐಪಿಸಿ 324) ಆರೋಪದಡಿ ಇದೀಗ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT