ಯಲಹಂಕ:ಅಯೋಧ್ಯಾನಗರ ಶಿವಾಚಾರ ವೈಶ್ಯ ನಗರ್ತಸಂಘದ ಆಶ್ರಯದಲ್ಲಿ ನಗರ್ತಪೇಟೆ ರಸ್ತೆಯಲ್ಲಿರುವ ರಾಮಭಜನಾ ಮಂದಿರದಲ್ಲಿ ಡಾ.ಶಿವಕುಮಾರ ಸ್ವಾಮೀಜಿಯವರ 114ನೇ ಜನ್ಮದಿನವನ್ನು ಆಚರಿಸಲಾಯಿತು.
ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದ ಸಂಘದ ಸದಸ್ಯರು, ಸಿಹಿ ವಿತರಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಮು.ಕೃಷ್ಣಮೂರ್ತಿ, ‘ಶಿವಕುಮಾರ ಸ್ವಾಮೀಜಿಯವರು ಅನ್ನದಾಸೋಹ ಮತ್ತು ಬಡಮಕ್ಕಳಿಗೆ ಶಿಕ್ಷಣ ನೀಡುವ ಕಾಯಕದಿಂದ ಇಡೀ ರಾಷ್ಟ್ರದಗಮನ ಸೆಳೆದಿದ್ದರು. ಅವರ ಶಿಕ್ಷಣಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಉನ್ನತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಸ್ಮರಿಸಿದರು.
ಸಂಘದ ಅಧ್ಯಕ್ಷ ಪುಟ್ಟರಾಜು, ಸದಸ್ಯ ವೀರಭದ್ರ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷೆ ಹೇಮಲತಾ ಚಿದಾನಂದ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.