ಬೆಂಗಳೂರು: ನಗರದ ಶಿವಾನಂದ ವೃತ್ತದ ಮೇಲ್ಸೇತುವೆಯಲ್ಲಿ ಕೊನೆಯ ಹಂತದ ಕಾಮಗಾರಿಗಳು ನಡೆಯುತ್ತಿದ್ದು, ಈ ವಾರಾಂತ್ಯ
ಮೇಲ್ಸೇತುವೆಯನ್ನು ಸಂಚಾರಕ್ಕೆ
ಮುಕ್ತಗೊಳಿಸಲಾಗುತ್ತದೆ.
‘ಮೇಲ್ಸೇತುವೆಯ ಒಂದು ಬದಿ ಯನ್ನು ಆಗಸ್ಟ್ 15ರಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತವಾಗಿಸಲಾಗಿತ್ತು. ನಂತರ ಕೆಲವು ದೂರುಗಳು ಬಂದವು. ಜಾಯಿಂಟ್ ಏರುಪೇರು, ಕೆಲವು ಭಾಗಗಳಲ್ಲಿ ಸಿಮೆಂಟ್ ಕಾಣುತ್ತಿದೆ ಎಂದರು. ನಾವು ಪ್ರಾಯೋಗಿಕ ಸಂಚಾ ರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಇವುಗಳನ್ನು ಪರಿಶೀಲಿಸಿ ಸರಿಪಡಿಸಲಾಗುತ್ತದೆ. ಕಾಮಗಾರಿ ಪೂರ್ಣವಾಗದಿರು ವುದರಿಂದ ಇವೆಲ್ಲ ಕಂಡುಬಂದಿವೆ’ ಎಂದು ಬಿಬಿಎಂಪಿ ಯೋಜನೆ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.