ADVERTISEMENT

ಶಿವರಾಮ ಕಾರಂತ ಬಡಾವಣೆ | ಅಭಿವೃದ್ಧಿ ಅಂದರೆ ಅನ್ನ ಕಿತ್ತುಕೊಳ್ಳುವುದೇ?

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 14:16 IST
Last Updated 11 ಮಾರ್ಚ್ 2023, 14:16 IST

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಂದ್ರೆ ಬಿಡಿಎ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಅತಿ ದೊಡ್ಡ ಯೋಜನೆ ಡಾ.ಶಿವರಾಮ ಕಾರಂತ ಬಡಾವಣೆ. ಇದಕ್ಕೆ ಭೂಮಿ ನೀಡಿದರೆ ಗ್ರಾಮಸ್ಥರ ಜೀವನವೂ ಸುಧಾರಿಸುತ್ತದೆ ಮತ್ತು ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಅಗತ್ಯ ಆದಾಯವೂ ಬರುತ್ತದೆ ಎಂಬ ಕಾರಣ ನೀಡಿ ಪ್ರಾಧಿಕಾರ ಈ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ ಬೆಂಗಳೂರಿನ ರಾಮಗೊಂಡನಹಳ್ಳಿ, ಸೋಮಶೆಟ್ಟಿಹಳ್ಳಿ, ಕೆಂಪಾಪುರ, ಆವಲಹಳ್ಳಿ, ಹಾರೋಹಳ್ಳಿ ಸೇರಿದಂತೆ 17 ಹಳ್ಳಿಗಳ ಒಟ್ಟು 3,546 ಎಕರೆ ಸ್ವಾಧೀನ ಪಡಿಸಿಕೊಂಡಿದೆ, ಈ ಯೋಜನೆ ವಿರುದ್ಧ ರೈತರು ಸಿಡಿದೆದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.