ADVERTISEMENT

ಕ್ರಿಯಾ ಯೋಜನೆಗೆ ತ್ವರಿತ ಅನುಮೋದನೆ: ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 29 ಮೇ 2021, 19:39 IST
Last Updated 29 ಮೇ 2021, 19:39 IST
ಬಿ. ಶ್ರೀರಾಮುಲು
ಬಿ. ಶ್ರೀರಾಮುಲು   

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯ (ಟಿಎಸ್‌ಪಿ) ಕ್ರಿಯಾ ಯೋಜನೆಗೆ ತ್ವರಿತವಾಗಿ ರಾಜ್ಯ ಪರಿಷತ್‌ನ ಅನುಮೋದನೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಕ್ರಿಯಾ ಯೋಜನೆ ಅನುಮೋದನೆವಿಳಂಬದಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುಷ್ಠಾನಕ್ಕೆ ಅಡ್ಡಿಯಾಗಿರುವ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ‘₹26 ಸಾವಿರ ಕೋಟಿ ಬಳಕೆಗೆ ಅಡ್ಡಿ’ ಶೀರ್ಷಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಗೆ ಪ್ರತಿಕ್ರಿಯಿಸಿರುವ ಅವರು, ‘ವರ್ಚುವಲ್‌ ಆಗಿ ರಾಜ್ಯ ಪರಿಷತ್‌ ಸಭೆ ನಡೆಸುವುದು ಅಥವಾ ಕೋವಿಡ್‌ ಕಾರಣದಿಂದ ನೇರವಾಗಿ ಮುಖ್ಯಮಂತ್ರಿಯವರ ಮೂಲಕ ಒಪ್ಪಿಗೆ ಪಡೆದು ಈ ಅನುದಾನದ ಬಳಕೆಗೆ ಅವಕಾಶ ಕಲ್ಪಿಸಲು ಪ್ರಯತ್ನ ನಡೆಯುತ್ತಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT