ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯ (ಟಿಎಸ್ಪಿ) ಕ್ರಿಯಾ ಯೋಜನೆಗೆ ತ್ವರಿತವಾಗಿ ರಾಜ್ಯ ಪರಿಷತ್ನ ಅನುಮೋದನೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಕ್ರಿಯಾ ಯೋಜನೆ ಅನುಮೋದನೆವಿಳಂಬದಿಂದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುಷ್ಠಾನಕ್ಕೆ ಅಡ್ಡಿಯಾಗಿರುವ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ‘₹26 ಸಾವಿರ ಕೋಟಿ ಬಳಕೆಗೆ ಅಡ್ಡಿ’ ಶೀರ್ಷಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಗೆ ಪ್ರತಿಕ್ರಿಯಿಸಿರುವ ಅವರು, ‘ವರ್ಚುವಲ್ ಆಗಿ ರಾಜ್ಯ ಪರಿಷತ್ ಸಭೆ ನಡೆಸುವುದು ಅಥವಾ ಕೋವಿಡ್ ಕಾರಣದಿಂದ ನೇರವಾಗಿ ಮುಖ್ಯಮಂತ್ರಿಯವರ ಮೂಲಕ ಒಪ್ಪಿಗೆ ಪಡೆದು ಈ ಅನುದಾನದ ಬಳಕೆಗೆ ಅವಕಾಶ ಕಲ್ಪಿಸಲು ಪ್ರಯತ್ನ ನಡೆಯುತ್ತಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.