ADVERTISEMENT

ಶ್ರೀರಾಮ ಬ್ರಹ್ಮರಥೋತ್ಸವ ಸಡಗರ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 19:45 IST
Last Updated 14 ಏಪ್ರಿಲ್ 2019, 19:45 IST
ಹಗದೂರು ಗ್ರಾಮದಲ್ಲಿ ಶ್ರೀರಾಮ ಬ್ರಹ್ಮರಥೋತ್ಸವ ನಡೆಯಿತು
ಹಗದೂರು ಗ್ರಾಮದಲ್ಲಿ ಶ್ರೀರಾಮ ಬ್ರಹ್ಮರಥೋತ್ಸವ ನಡೆಯಿತು   

ಮಹದೇವಪುರ: ಹಗದೂರು ಗ್ರಾಮದಲ್ಲಿನ ಶ್ರೀರಾಮ ದೇವರ ಬ್ರಹ್ಮರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಆರೂವರೆ ಗಂಟೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಉತ್ಸವ ಆರಂಭಗೊಂಡಿತು. ರಾಮ, ಲಕ್ಷ್ಮಣ ಹಾಗೂ ಸೀತಾದೇವಿ ವಿಗ್ರಹಕ್ಕೆ ವಿವಿಧ ಹೂಗಳ ಅಲಂಕಾರ ಮಾಡಲಾಗಿತ್ತು.

ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ದೇವರಿಗ ಹೂ, ಹಣ್ಣು, ಕಾಯಿಗಳನ್ನು ಅರ್ಪಿಸಿದರು. ಬಳಿಕ ಮಧ್ಯಾಹ್ನ ಶ್ರೀರಾಮ ದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಮಾಡಲಾಯಿತು. ಬಳಿಕ ನೆರೆದ ಭಕ್ತಾದಿಗಳು ರಥವನ್ನು ಹಗದೂರು ಗ್ರಾಮದ ಮುಖ್ಯರಸ್ತೆಯಲ್ಲಿ ಭಕ್ತಿಭಾವದಿಂದ ಎಳೆದು ಸಂಭ್ರಮಿಸಿದರು.

ADVERTISEMENT

ಈ ಸಂದರ್ಭದಲ್ಲಿ ಗ್ರಾಮಸ್ಥರು ಉತ್ಸವಕ್ಕೆ ಆಗಮಿಸಿದ ಭಕ್ತರಿಗಾಗಿ ಪಾನಕ, ಮಜ್ಜಿಗೆ ಹಾಗೂ ಕೋಸಂಬರಿ ಪ್ರಸಾದವನ್ನು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.