ADVERTISEMENT

ಸಿದ್ದರಾಮಯ್ಯನದ್ದು ರಾಮನ ಮುಖ, ರಾವಣನ ಬುದ್ಧಿ: ನಳೀನ್‌ಕುಮಾರ್ ಕಟೀಲ್

ಸಿದ್ದರಾಮಯ್ಯ ವಿರುದ್ಧ ನಳಿನ್ ಕುಮಾರ್‌ ಕಟೀಲ್‌ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 29 ಮೇ 2022, 20:26 IST
Last Updated 29 ಮೇ 2022, 20:26 IST

ತುಮಕೂರು:‘ಸಿದ್ದರಾಮಯ್ಯ ಅವರಮುಖ ರಾಮನದ್ದು. ಚಿಂತನೆ ಮತ್ತು ಬುದ್ದಿ ಮಾತ್ರ ರಾವಣನದ್ದು. ಹಾಗಾಗಿ ಸಿದ್ದರಾಮಯ್ಯ ಅವರು ಸಿದ್ದರಾವಣ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಬೇಕು’ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಸಲಹೆ ಮಾಡಿದ್ದಾರೆ.

ನಗರದಲ್ಲಿ ಭಾನುವಾರ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದಿಂದ ಹಮ್ಮಿಕೊಂಡಿದ್ದ ರಾಜ್ಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

‘ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿಯಾಗಲು ಬಿಡಲಿಲ್ಲ. ಈಗ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಕುರ್ಚಿಯ ಮೇಲೆ ಟವೆಲ್ ಹಾಕಿದ್ದಾರೆ. ಆದರೆ, ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ' ಎಂದುಭವಿಷ್ಯ ನುಡಿದರು.

ADVERTISEMENT

‘ಖರ್ಗೆ, ಪರಮೇಶ್ವರ ಅವರನ್ನು ರಾಜಕೀಯವಾಗಿ ಮುಗಿಸಿ ಪರಿಶಿಷ್ಟ ರಿಗೆ ಅನ್ಯಾಯ ಮಾಡಿದರು. ರಾಜ ಕೀಯವಾಗಿ ಬೆಳೆಸಿದ ದೇವೇಗೌಡರನ್ನು ತುಳಿಯುವ ಕೆಲಸ ಮಾಡಿದರು. ಅವರಿಂದಾಗಿ ರಾಜ್ಯ ಈಗ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಿದೆ. ಅವರಿಗೆ ಧನ್ಯವಾದಗಳು’ ಎಂದರು.

ಸಮಾಜವಾದದ ಹೆಸರಲ್ಲಿ ರಾಜಕೀಯಕ್ಕೆ ಬಂದು, ಜಾತಿ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಸಿದ್ದರಾಮಯ್ಯಗೆ ಕುರುಬ ಸಮುದಾಯದ ಬಗ್ಗೆ ಕಾಳಜಿಯಿಲ್ಲ.
ಅಲ್ಪಸಂಖ್ಯಾತರ ಮತಬ್ಯಾಂಕ್‌ಗಾಗಿ ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಮರು ಹೊಡೆದಾಡುವಹಾಗೆ ಮಾಡಿದರು
ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.