ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ವಯೋಮಿತಿ ಹೆಚ್ಚಿಸುವಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
‘ಕಾನ್ಸ್ಟೆಬಲ್ ನೇಮಕಾತಿ ವಯೋಮಿತಿಯನ್ನು ಕನಿಷ್ಠ 19 ವರ್ಷ ಮತ್ತು ಗರಿಷ್ಠ 25 ವರ್ಷ (ಎಸ್ಸಿ, ಎಸ್ಟಿಗೆ 27) ನಿಗದಿ ಮಾಡಲಾಗಿದೆ. ಹೊರ ರಾಜ್ಯದಲ್ಲಿ ಹೆಚ್ಚಳ ಮಾಡಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲೂ ಕಾನ್ಸ್ಟೆಬಲ್ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸಬೇಕು’ ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಸ್ಪರ್ಧಾತ್ಮಕ ಪರೀಕ್ಷಾ ವಿದ್ಯಾರ್ಥಿಗಳ ಒಕ್ಕೂಟವು ಗೃಹ ಸಚಿವರಿಗೆ ಈಗಾಗಲೇ ಮನವಿ ಸಲ್ಲಿಸಿದೆ.
ಇದೇ ಮನವಿಯನ್ನು ಉಲ್ಲೇಖಿಸಿ ಶುಕ್ರವಾರ ಪತ್ರ ಬರೆದಿರುವ ಸಿದ್ದರಾಮಯ್ಯ, ‘ಒಕ್ಕೂಟದ ಅಧ್ಯಕ್ಷರು ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಿ’ ಎಂದು ಗೃಹಸಚಿವರನ್ನು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.