ADVERTISEMENT

ಮದ್ಯದಂಗಡಿ ತೆರೆದದ್ದು ಮುಖ್ಯಮಂತ್ರಿಯವರ ಅವಸರದ ತೀರ್ಮಾನ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 5 ಮೇ 2020, 20:51 IST
Last Updated 5 ಮೇ 2020, 20:51 IST
   

ಬೆಂಗಳೂರು: ಮದ್ಯದಂಗಡಿ ತೆರೆದದ್ದು ಮುಖ್ಯಮಂತ್ರಿಯವರ ಅವಸರದ ಮತ್ತು ಪೂರ್ವ ಸಿದ್ಧತೆ ಇಲ್ಲದ ನಿರ್ಧಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಹುತೇಕ ಕಡೆಗಳಲ್ಲಿ ಜನರು ಅಂತರವನ್ನು ಪಾಲಿಸಿಲ್ಲ. ಇದರಿಂದ ಕೊರೊನಾ ಸೊಂಕು ಉಲ್ಭಣಿಸಿದರೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಅವರ ಟ್ವೀಟ್‌ ಮಾಡಿದ್ದಾರೆ.

ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ತಕ್ಷಣವೇ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು. ಈಗ ತಮ್ಮ ವರಸೆ ಬದಲಿಸಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.