ADVERTISEMENT

ಶಿಕ್ಷಣ ನೀತಿ– ಅಧಿವೇಶನದಲ್ಲಿ ಚರ್ಚೆಯಾಗಲಿ: ಎಸ್‍ಐಒ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 17:49 IST
Last Updated 5 ಸೆಪ್ಟೆಂಬರ್ 2020, 17:49 IST

ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ 'ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020' ಕುರಿತು ಮುಕ್ತ ಚರ್ಚೆ ನಡೆಸಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್‍ನ (ಎಸ್‍ಐಒ) ರಾಜ್ಯ ಘಟಕ ಆಗ್ರಹಿಸಿದೆ.

'ಶಿಕ್ಷಣ ನೀತಿಯನ್ನು ಏಕಪಕ್ಷೀಯ ನಿರ್ಧಾರದಿಂದ ತರಾತುರಿಯಲ್ಲಿ ಜಾರಿ ಮಾಡುವ ಕೇಂದ್ರದ ಬಿಜೆಪಿ ಸರ್ಕಾರದ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದರಲ್ಲಿ ಕೆಲವು ಗೊಂದಲಕಾರಿ ಅಂಶಗಳಿರುವುದರಿಂದ ಅವುಗಳನ್ನು ಮರೆಮಾಚಿ, ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಷಡ್ಯಂತ್ರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ' ಎಂದು ಎಸ್‌ಐಒ ದೂರಿದೆ.

'ಶಿಕ್ಷಣ ನೀತಿಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕು. ಅದರಲ್ಲಿರುವ ಲೋಪಗಳ ಬಗ್ಗೆ ಜನಪ್ರತಿನಿಧಿಗಳು ಚರ್ಚೆ ನಡೆಸಿದ ನಂತರ ಲೋಪಗಳನ್ನು ಸರಿಪಡಿಸಿ ನಂತರವಷ್ಟೇ ಜಾರಿಗೆ ತರಬೇಕು' ಎಂದು ಸಂಘಟನೆಯು ಆಗ್ರಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.