ಬೆಂಗಳೂರು: ಸರ್ ಎಂ.ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ತ್ರಿ-ದಶಮಾನೋತ್ಸವ, ವಿಚಾರ ಸಂಕಿರಣ ಮತ್ತು ಪ್ರತಿಷ್ಠಾನದ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಏ.28ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಜೆ 5.30ರಿಂದ ಕಾರ್ಯಕ್ರಮ ನಡೆಯಲಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ರಮಾನಂದ ಗುರೂಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಸಾಧ್ವಿ ಯೋಗಿನಿ ಮಾತಾ ಆಶೀರ್ವಚನ ನೀಡಲಿದ್ದಾರೆ.ಪ್ರತಿಷ್ಠಾನದ ವತಿಯಿಂದ ರಂಗಭೂಮಿ ಕಲಾವಿದರಾದ ಶಂಕರ್ ಭಟ್ ಮತ್ತು ಕಮನಿಧರನ್ ಅವರಿಗೆ ‘ರಾಷ್ಟ್ರೀಯ ಕಲಾ ವಿಭೂಷಣ ರಾಷ್ಟ್ರ ಪ್ರಶಸ್ತಿ’ ಪ್ರದಾನ ನಡೆಯಲಿದೆ. ರಾಷ್ಟ್ರೀಯ ಗ್ರಂಥಾಲಯ ರತ್ನ ಪ್ರಶಸ್ತಿ, ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನವೂ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.