ಬೆಂಗಳೂರು: ಕೋಣನಕುಂಟೆ ಠಾಣೆ ವ್ಯಾಪ್ತಿಯ ಕಟ್ಟಡವೊಂದರ ಮೂರನೇ ಮಹಡಿಯಿಂದ ಬಿದ್ದು ಕೆ.ಜೆ.ಗಿರೀಶ್ (28) ಎಂಬುವರು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಮುಳಬಾಗಿಲಿನ ಗಿರೀಶ್, ನಗರದ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಂಬೂಸವಾರಿ ದಿಣ್ಣೆಯಲ್ಲಿ ವಾಸವಿದ್ದರು.
‘ಶುಕ್ರವಾರ ರಾತ್ರಿ ಗಿರೀಶ್ ಅವರು ಸ್ನೇಹಿತರ ಜೊತೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದರು. ಮೊಬೈಲ್ ಹಿಡಿದುಕೊಂಡೇ ಮನೆಯಿಂದ ಹೊರಗೆ ಬಂದು ಮಹಡಿಯಿಂದ ಹಾರಿದ್ದರು. ರಕ್ತಸಿಕ್ತವಾಗಿ ಬಿದ್ದಿದ್ದ ಅವರನ್ನು ಗಮನಿಸಿದ್ದ ಸ್ಥಳೀಯ ನಿವಾಸಿಗಳು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.