ಬೆಂಗಳೂರು: ನಗರದ ರಾಷ್ಟ್ರೀಯ ಸೈನಿಕ ಸ್ಮಾರಕ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವೀರಗಲ್ಲನ್ನು ರವಾನಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಬಿಡಿಎ ಅಧಿಕಾರಿಗಳು ಸಭೆ ನಡೆಸಿದರು.
ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಸ್ಮರಣಾರ್ಥ ಸುಮಾರು 450 ಟನ್ ತೂಕದ ವೀರಗಲ್ಲನ್ನು ಸ್ಥಾಪಿಸಲಾಗುತ್ತಿದೆ. 75 ಅಡಿ ಉದ್ದದ ಏಕಶಿಲಾ ಸ್ಮಾರಕವನ್ನು ದೇವನಹಳ್ಳಿಯ ಗಣಿ ಪ್ರದೇಶದಿಂದ ಬಳ್ಳಾರಿ ರಸ್ತೆ ಮೂಲಕ ಸ್ಮಾರಕ ಪ್ರದೇಶಕ್ಕೆ ಸಾಗಿಸಲಾಗುತ್ತದೆ. ಪೊಲೀಸ್ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಮತ್ತು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.