ADVERTISEMENT

‘ಎಲ್ಲ ವರ್ಗಕ್ಕೂ ಶಿಕ್ಷಣ, ದಾಸೋಹ’–ಡಾ.ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ

ಸೋಮೇಶ್ವರಸ್ವಾಮಿ ವೀರಶೈವ ಸಮಾಜ ಸೇವಾ ಸಂಘದ ಶತಮಾನೋತ್ಸವ

​ಪ್ರಜಾವಾಣಿ ವಾರ್ತೆ
Published 15 ಮೇ 2022, 20:10 IST
Last Updated 15 ಮೇ 2022, 20:10 IST
ನಗರದಲ್ಲಿ ಭಾನುವಾರ ಸೋಮೇಶ್ವರಸ್ವಾಮಿ ವೀರಶೈವ ಸಮಾಜ ಸೇವಾ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿವಗಂಗಾ ಕ್ಷೇತ್ರದ ಮಲಯಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಸೋಮೇಶ್ವರಸ್ವಾಮಿ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಆರ್. ಸೋಮಶೇಖರ್, ಬಿಜೆಪಿ ಮುಖಂಡ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಮತ್ತು ಕರ್ನಾಟಕ ಸಾಬೂನು ನಿಗಮ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಕಾಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲೆ ಕಾರ್ಯದರ್ಶಿ ಎ.ಆರ್. ಸಪ್ತಗಿರಿ ಗೌಡ ಅವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು - –ಪ್ರಜಾವಾಣಿ ಚಿತ್ರ
ನಗರದಲ್ಲಿ ಭಾನುವಾರ ಸೋಮೇಶ್ವರಸ್ವಾಮಿ ವೀರಶೈವ ಸಮಾಜ ಸೇವಾ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿವಗಂಗಾ ಕ್ಷೇತ್ರದ ಮಲಯಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಸೋಮೇಶ್ವರಸ್ವಾಮಿ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಆರ್. ಸೋಮಶೇಖರ್, ಬಿಜೆಪಿ ಮುಖಂಡ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಮತ್ತು ಕರ್ನಾಟಕ ಸಾಬೂನು ನಿಗಮ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಕಾಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲೆ ಕಾರ್ಯದರ್ಶಿ ಎ.ಆರ್. ಸಪ್ತಗಿರಿ ಗೌಡ ಅವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು - –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ವೀರಶೈವ ಸಮಾಜ ಯಾರನ್ನೂ ವಿರೋಧಿಸಿಲ್ಲ. ಜಾತಿ ಭೇದ ಮಾಡದೆಯೇ ಎಲ್ಲ ಸಮುದಾಯಗಳಿಗೆ ಶಿಕ್ಷಣ, ದಾಸೋಹ ನೀಡುವ ಪರಂಪರೆ ಹೊಂದಿದೆ’ ಎಂದು ಶಿವಗಂಗಾ ಕ್ಷೇತ್ರದ ಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠದ ಪಟ್ಟಾಧ್ಯಕ್ಷ ಡಾ.ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಅರಳೇಪೇಟೆಯಲ್ಲಿ ಭಾನುವಾರ ನಡೆದ ಸೋಮೇಶ್ವರಸ್ವಾಮಿ ವೀರಶೈವ ಸಮಾಜ ಸೇವಾ ಸಂಘದ ಶತಮಾನೋತ್ಸವ, ರೇಣುಕಾ ಚಾರ್ಯರು ಮತ್ತು ಬಸವೇಶ್ವರ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು,‘100 ವರ್ಷಗಳಿಂದಲೂ ವಿವಿಧ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಸಂಘದ ಚಟುವಟಿಕೆಗಳು ಶ್ಲಾಘನೀಯ’ ಎಂದರು.

ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದ್ದರೂ ಧರ್ಮ, ಸಂಪ್ರದಾಯಗಳ ಆಚರಣೆಗಳಲ್ಲಿ ಜನರು ಎಂದಿಗೂ ಹಿಂದೆ ಬಿದ್ದಿಲ್ಲ. ಇದು ನಮ್ಮ ದೇಶದ ಹೆಮ್ಮೆಯ ಪ್ರತೀಕ' ಎಂದು ನುಡಿದರು.

ADVERTISEMENT

‘ಸೋಮೇಶ್ವರಸ್ವಾಮಿ ವೀರಶೈವ ಸಮಾಜ ಸೇವಾ ಸಂಘದ ಯಶಸ್ಸಿನ ಹಿಂದೆ ಸಾಕಷ್ಟು ಜನರ ಶ್ರಮ ಅಡಗಿದೆ. ಪ್ರತಿ ವರ್ಷ ನಾನಾ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಸವಾದಿ ಶರಣರ ಚಿಂತನೆಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ’ ಎಂದು ಶ್ಲಾ‌ಘಿಸಿದರು.

ಕಾರ್ಯಕ್ರಮದಲ್ಲಿ ‘ಅರುಣಶ್ರೀ' ಶತಮಾನೋತ್ಸವದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಪಿಎಚ್‌.ಡಿ ಪದವಿ ಪಡೆದ ಡಾ. ಮಲಯಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಅವರನ್ನುಇದೇ ವೇಳೆ ಅಭಿನಂದಿಸಲಾಯಿತು. ಮಾಜಿ ಶಾಸಕ ಪಿ.ಎಸ್. ಪ್ರಕಾಶ್, ಬಾಳೆಹೊನ್ನೂರು ಶಾಖಾ ಮಠದ ಯಡಿಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಮಾಲೂರು ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.