ಬೆಂಗಳೂರು: ಯಕೃತ್ತು ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ಪುತ್ರನೇ ಅಂಗಾಂಗ ದಾನ ಮಾಡುವ ಮೂಲಕ ಆಸರೆಯಾಗಿದ್ದಾರೆ.
ಜೀವ ಸಾರ್ಥಕತೆ ಯೋಜನೆಯಡಿ 49 ವರ್ಷದ ವ್ಯಕ್ತಿಯ ಹೆಸರನ್ನು ನೋಂದಾಯಿಸಲಾಗಿತ್ತು. ಆದರೆ, ಅವರ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ತಕ್ಷಣವೇ ಯಕೃತ್ತು ಕಸಿ ಅಗತ್ಯಎಂದು ವೈದ್ಯರು ಸೂಚಿಸಿದ್ದರು. ದಾನಿಗಳು ಸಿಗದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಓದುತ್ತಿರುವ 21 ವರ್ಷದ ಪುತ್ರನೇ ಯಕೃತ್ತು ದಾನ ಮಾಡಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.