ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಕೇರಳದ ವಿವಿಧ ನಗರಗಳಿಗೆ ಸೆ.6 ಮತ್ತು 7ರಂದು ಕೆಎಸ್ಆರ್ಟಿಸಿ ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಿದೆ.
ಕಣ್ಣೂರು, ಕೋಯಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರ ಸೇರಿ ಹಲವು ಸ್ಥಳಗಳಿಗೆ ಬೆಂಗಳೂರಿನಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಬಸ್ಗಳು ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.