ADVERTISEMENT

ಬೆಂಗಳೂರು–ವಿಜಯಪುರ ನಡುವೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 21:04 IST
Last Updated 8 ಜನವರಿ 2026, 21:04 IST
<div class="paragraphs"><p> ರೈಲು</p></div>

ರೈಲು

   

ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿರುವ ಕಾರಣ ನೈರುತ್ಯ ರೈಲ್ವೆಯು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ಜನವರಿ 13 ಮತ್ತು 23ರಂದು ರಾತ್ರಿ 7.15ಕ್ಕೆ ಎಸ್ಎಂವಿಟಿಯಿಂದ
ಹೊರಡುವ ರೈಲು ಮರುದಿನ ಬೆಳಿಗ್ಗೆ 7ಕ್ಕೆ ವಿಜಯಪುರ ತಲುಪಲಿದೆ. ಜ.18 ಮತ್ತು 26ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 6.30ಕ್ಕೆ ಎಸ್ಎಂವಿಟಿಗೆ ತಲುಪಲಿದೆ.

ADVERTISEMENT

ಬಾಣಸವಾಡಿ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.