ADVERTISEMENT

ಶ್ರೀರಾಮದೇವರ ಬ್ರಹ್ಮ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 20:17 IST
Last Updated 31 ಮಾರ್ಚ್ 2023, 20:17 IST
ಹಗದೂರಿನ ರಾಮದೇವರ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು.
ಹಗದೂರಿನ ರಾಮದೇವರ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು.   

ಕೆ.ಆರ್.ಪುರ: ಶ್ರೀರಾಮನವಮಿ ಅಂಗವಾಗಿ ಮಹದೇವಪುರದ ವೈಟ್‌ಫೀಲ್ಡ್ ಸಮೀಪದ ಹಗದೂರಿನ ರಾಮದೇವರ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು.

ರಥೋತ್ಸವಕ್ಕೆ ಶಾಸಕ ಅರವಿಂದ ಲಿಂಬಾವಳಿ ಚಾಲನೆ ನೀಡಿದರು. ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಪೂಜೆ, ಬಗೆಬಗೆಯ ಹೂವಿನಿಂದ ಅಲಂಕಾರ ಮಾಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವರ ಮೆರವಣಿಗೆ ಮಾಡಲಾಯಿತು.

ಜಾತ್ರಾ ಮಹೊತ್ಸವದಲ್ಲಿ ಹಳ್ಳಿಕಾರ್ ಎತ್ತುಗಳಿಂದ ಮೆರವಣಿಗೆ ಹಾಗೂ ಡೊಳ್ಳು ಕುಣಿತ, ಗಾರುಡಿ ಗೊಂಬೆ, ವೀರಗಾಸೆ ಸೇರಿದಂತೆ ಕಲಾತಂಡಗಳ ನೃತ್ಯವು ನೆರೆದಿದ್ದವರನ್ನು ಆಕರ್ಷಿಸಿತು. ಹಗದೂರು ಕಾಲೊನಿ, ಇಮ್ಮಡಿಹಳ್ಳಿ, ವಿನಾಯಕನಗರ, ಚನ್ನಸಂದ್ರ, ನಾಗೂಂಡನಹಳ್ಳಿ ಸೇರಿದಂತೆ ಹಗದೂರು ಸುತ್ತಮುತ್ತಲಿನ ಭಕ್ತಾದಿಗಳು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಶ್ರೀರಾಮ‌ ಸೇವಾ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಅನ್ನದಾಸೋಹ ಏರ್ಪಡಿಲಾಗಿತ್ತು.

ADVERTISEMENT

ಮುಳಬಾಗಿಲು ಶಾಸಕ ಎಚ್. ನಾಗೇಶ್, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಶ್ರೀರಾಮ ಸೇವಾ ಸಮಿತಿ ಸದಸ್ಯರು ಹಾಗೂ ಹಗದೂರು ಗ್ರಾಮಸ್ಥರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.