ಬೆಂಗಳೂರು: ಹೆಬ್ಬಾರ ಶ್ರೀವೈಷ್ಣವ ಸಭಾಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ವಕೀಲ ಬಿ.ಬಾಲಾಜಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಲೇವಾರಿ ಮಾಡಿದೆ.
‘ಒಂದು ತಿಂಗಳ ಒಳಗಾಗಿ ಸಭಾದ ಆಡಳಿತ ಮಂಡಳಿಗೆ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಬೆಂಗಳೂರು ನಗರ ಜಿಲ್ಲೆಯ, ಸಂಘಗಳ ಜಿಲ್ಲಾ ನೋಂದಣಾಧಿಕಾರಿಗೆ ನ್ಯಾಯಪೀಠ ನಿರ್ದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.