ಬೆಂಗಳೂರು: ಶ್ರೀವಸಿಷ್ಠ ಕೋ– ಆಪರೇಟಿವ್ ಕ್ರೆಡಿಟ್ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ, ಆರೋಪಿಗಳಾದ ಅಧ್ಯಕ್ಷ ಕೆ.ಎನ್. ವೆಂಕಟನಾರಾಯಣ ಹಾಗೂ ಅವರ ಮಗನಾದ ನಿರ್ದೇಶಕ ಕೆ.ವಿ.ಕೃಷ್ಣಪ್ರಸಾದ್ ನಗರದ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಠೇವಣಿದಾರರಿಂದ ಹಣ ಸಂಗ್ರಹಿಸಿ ವಂಚಿಸಿದ್ದ ಆರೋಪದಡಿ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನದಿಂದ ಪಾರಾಗಲು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಹ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿತ್ತು.
ತನಿಖಾಧಿಕಾರಿ ಎದುರು ಹಾಜರಾಗಿದ್ದ ತಂದೆ–ಮಗ, ಹೇಳಿಕೆ ದಾಖಲಿಸಿದ್ದರು. ತನಿಖೆಗೆ ಸಹಕರಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಇದೀಗ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆನಡೆಯುತ್ತಿದ್ದು, ತಮ್ಮ ವಕೀಲರ ಸಮ್ಮುಖ
ದಲ್ಲಿ ವೆಂಕಟನಾರಾಯಣ, ಕೃಷ್ಣ ಪ್ರಸಾದ್ಮಾರ್ಚ್ 24 ಶರಣಾದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.