ADVERTISEMENT

‘ಶಾಲಾ ಹಂತದಲ್ಲೇ ಪರೀಕ್ಷೆ ನಡೆಸಿ’

​ಪ್ರಜಾವಾಣಿ ವಾರ್ತೆ
Published 2 ಮೇ 2020, 21:05 IST
Last Updated 2 ಮೇ 2020, 21:05 IST

ಬೆಂಗಳೂರು: ಕೊರೊನಾ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಗಳನ್ನು ಶಾಲಾ ಹಂತದಲ್ಲೇ ನಡೆಸುವುದು ಸೂಕ್ತ ಎಂದು ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ-ಕರ್ನಾಟಕ ಸಂಘಟನೆ ಸಲಹೆ ನೀಡಿದೆ.

ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಗಳಿಂದ ವಿನಾಯಿತಿ ನೀಡಿ, ಆಂತರಿಕ ಅಂಕಗಳ ಆಧಾರದಲ್ಲಿ ತೇರ್ಗಡೆಗೊಳಿಸಲೂ ಬಹುದು.

ಈಗಾಗಲೇ ಸಿದ್ಧಗೊಂಡಿರುವ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆಗಳನ್ನು ಬಳಸಿ ಸದರಿ ಶಾಲೆಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಬಹುದು. ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆಯೂ ಶಿಕ್ಷಕರು ಗುಂಪು ಸೇರುವುದನ್ನು ತಡೆಯಲು ಅದೇ ಶಾಲೆಗಳಲ್ಲಿ ಮೌಲ್ಯಮಾಪನ ಮಾಡಿ, ಅಂಕಗಳನ್ನು ಮಂಡಳಿಗೆ ರವಾನಿಸಬಹುದು.

ADVERTISEMENT

ಬಿಸಿಯೂಟದ ಬದಲು ಎಲ್ಲ ಮಕ್ಕಳಿಗೆ ಪಡಿತರ ವಿತರಿಸಬೇಕು. ಮಕ್ಕಳ ಸಹಾಯಕ್ಕಾಗಿ ಊರಿನ ಶಾಲೆಯಲ್ಲಿ ಕನಿಷ್ಠ ಒಬ್ಬರು ಶಿಕ್ಷಕರನ್ನು ನಿಯೋಜಿಸಬೇಕು. ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು ಒದಗಿಸಬೇಕು.

ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಬೇಕು. ಬಡಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಸಂಘಟನೆಯು ಸರ್ಕಾರವನ್ನು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.