ಆನೇಕಲ್: ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದ ಡ್ಯಾಡಿ ಗಾರ್ಡ್ನಲ್ಲಿ ಮಂಗಳವಾರ 10ನೇ ತರಗತಿ ವಿದ್ಯಾರ್ಥಿಯೊಬ್ಬ ಐದು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡವಿದ್ಯಾರ್ಥಿಯನ್ನು ಆದಿತ್ಯ ಪಾಟೀಲ (17) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಅರಿವಳಿಕೆ ತಜ್ಞರಾಗಿರುವ ಡಾ.ಶರಣು ಪಾಟೀಲ ಮತ್ತು ಡಾ. ಮಮತಾ ಪಾಟೀಲ ದಂಪತಿಯ ಮಗ.
10ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿತ್ಯ ಮನೆಯಲ್ಲಿಯೇ ಪರೀಕ್ಷೆಗೆ ತಯಾರಿ ನಡೆಸಿದ್ದ. ಮಧ್ಯಾಹ್ನ 1 ಗಂಟೆಗೆ ಅಂಗಡಿಗೆ ಹೋಗುವುದಾಗಿ ಹೇಳಿ ಹೊರಹೋಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇಲಿಂದ ಜಿಗಿದ ರಭಸಕ್ಕೆ ಆತನ ತಲೆ ಹೋಳಾಗಿ ಮೆದುಳು ಚಿಲ್ಲಾಪಿಲ್ಲಿಯಾಗಿದೆ. ಸ್ಥಳೀಯರು ಆದಿತ್ಯನನ್ನು ಗುರುತಿಸಿ ಪೋಷಕರಿಗೆ ಮಾಹಿತಿ ನೀಡಿ
ದ್ದಾರೆ. ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ಎಂ.ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.