ರಾಜರಾಜೇಶ್ವರಿನಗರ: ‘ಸರ್ವರಿಗೂ ಸೂರು ಯೋಜನೆಯ ಅನುಷ್ಠಾನಕ್ಕೆ ನಗರದಲ್ಲಿ 4,500 ಎಕರೆ ಜಮೀನನ್ನು ಗುರುತಿಸಿ ವಸತಿ ಇಲಾಖೆಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಅಂಜನಾನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ, ಮಹಿಳಾ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.
‘ಮುಖ್ಯಮಂತ್ರಿಯವರ ಒಂದು ಲಕ್ಷ ವಸತಿ ಯೋಜನೆಯಡಿ ಶೀಘ್ರದಲ್ಲೇ 44 ಸಾವಿರ ಮನೆಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.