ADVERTISEMENT

ಎಸ್‌.ಟಿಗೆ ಕುರುಬ ಸಮುದಾಯ: ಹೋರಾಟಕ್ಕೆ ಸಮಿತಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 21:30 IST
Last Updated 29 ಸೆಪ್ಟೆಂಬರ್ 2020, 21:30 IST

ಬೆಂಗಳೂರು: ಕುರುಬರ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಹೋರಾಟ ನಡೆಸಲು ರಚಿಸಲಾಗಿರುವ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಕಾಗಿನೆಲೆ ಮಹಾಸಂಸ್ಥಾನದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ತಿಂಥಣಿ ಶಾಖಾಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ, ಮೈಸೂರು ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ ಅವರು ಸಮಿತಿಯ ಮಾರ್ಗದರ್ಶಕರಾಗಿರುತ್ತಾರೆ.

ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಂಡೆಪ್ಪ ಕಾಶೆಂಪೂರ, ಎಚ್‌.ವಿಶ್ವನಾಥ್‌, ಎಚ್.ಎಂ. ರೇವಣ್ಣ ಗೌರವಾಧ್ಯಕ್ಷರಾಗಿದ್ದು, ಅಧ್ಯಕ್ಷರಾಗಿ ಕೆ. ವಿರೂಪಾಕ್ಷಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.