ADVERTISEMENT

ಕಾಲ್ತುಳಿತ: ಭದ್ರತಾ ವೈಫಲ್ಯ ಅಷ್ಟೇ ಅಲ್ಲ, ಆಡಳಿತ ವೈಫಲ್ಯವೂ ಇದೆ: MP ಯದುವೀರ್

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 9:04 IST
Last Updated 5 ಜೂನ್ 2025, 9:04 IST
ಯದುವೀರ್
ಯದುವೀರ್   

ಮೈಸೂರು: ‘ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಗೆಲುವನ್ನು ಆಚರಿಸಲು ಬಂದಿದ್ದ ಅಭಿಮಾನಿಗಳ ದುರಂತ ಸಾವು ಮತ್ತು ಗಾಯಗಳಾಗಿರುವುದನ್ನು ತಿಳಿದು ಆಘಾತವಾಗಿದೆ’ ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಆರ್‌ಸಿಬಿ ತಂಡದ ಅಪಾರ ಬೆಂಬಲ, ಜನರ ಆಚರಣೆ ಮತ್ತು ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರೂ ಸರಿಯಾಗಿ ನಿಭಾಯಿಸದೇ, ಪೂರ್ವ ಸಿದ್ಧತೆ ಇಲ್ಲದೆ ತರಾತುರಿಯಲ್ಲಿ ಕಾರ್ಯಕ್ರಮ ನಡೆಸಿದ್ದಕ್ಕಾಗಿ ಈ ರೀತಿಯ ಘಟನೆ ನಡೆದಿದೆ’ ಎಂದು ದೂರಿದ್ದಾರೆ.

‘ಇದು ಕೇವಲ ಭದ್ರತಾ ವೈಫಲ್ಯವಲ್ಲ, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ವೈಫಲ್ಯ. ರಾಜ್ಯ ಸರ್ಕಾರ ನಿಯೋಜಿತವಾಗಿ ಕಾರ್ಯನಿರ್ವಹಿಸಿ ಈ ದುರಂತವನ್ನು ತಡೆಯಬಹುದಿತ್ತು ಮತ್ತು ತಡೆಯಬೇಕಾಗಿತ್ತು’ ಎಂದು ಹೇಳಿದ್ದಾರೆ.

ADVERTISEMENT

‘ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ರಾಜ್ಯ ಸರ್ಕಾರವು ಈ ನಿರ್ಲಕ್ಷ್ಯಕ್ಕೆ ಉತ್ತರಿಸಬೇಕು ಹಾಗೂ ಈ ರೀತಿಯ ವೈಫಲ್ಯಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.