ಬೆಂಗಳೂರು:ರಾಜಕಾಲುವೆಗಳಅಭಿವೃದ್ಧಿಗೆಸರ್ಕಾರ₹1,500ಕೋಟಿಅನುದಾನಬಿಡುಗಡೆಮಾಡಿದೆ.
ಪ್ರಾಥಮಿಕ ಹಂತದ ರಾಜಕಾಲುವೆಗಳ ಅಭಿವೃದ್ಧಿಗೆ ₹1005.12 ಕೋಟಿ ಮತ್ತು ದ್ವಿತೀಯ ಹಂತದ ರಾಜಕಾಲುವೆಗಳ ಅಭಿವೃದ್ಧಿಗೆ ₹481.88 ಕೋಟಿ ಬಿಡುಗಡೆ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
‘ತೃತೀಯ ಹಂತದ ರಾಜಕಾಲುವೆಗಳನ್ನು ಬಿಬಿಎಂಪಿ ಸ್ವಂತ ಅನುದಾನದಲ್ಲಿ ಕಡ್ಡಾಯವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು. ಟೆಂಡರ್ ಪ್ರಕ್ರಿಯೆ ನಡೆಸಿಯೇ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು’ ಎಂದು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.