ADVERTISEMENT

ರಾಜ್ಯಮಟ್ಟದ ಅತ್ಯುತ್ತಮ ಕಾದಂಬರಿ ಪ್ರಶಸ್ತಿ: ಕೃತಿಗಳ ಆಹ್ವಾನ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 19:48 IST
Last Updated 22 ಡಿಸೆಂಬರ್ 2025, 19:48 IST
   

ಬೆಂಗಳೂರು: ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು ರಾಜ್ಯಮಟ್ಟದ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗಾಗಿ ಲೇಖಕರು ಮತ್ತು ಪ್ರಕಾಶಕರಿಂದ ಕೃತಿಗಳನ್ನು ಆಹ್ವಾನಿಸಿದೆ.

‍ಪ‍್ರಶಸ್ತಿಯು ₹25 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಾದಂಬರಿಗಳು 2025 ರಲ್ಲಿ ಪ್ರಕಟವಾಗಿರಬೇಕು. ಕಾದಂಬರಿಯ 3 ಪ್ರತಿಗಳನ್ನು ಜನವರಿ 30ರ ಒಳಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ. ಹನೀಫ್ ತಿಳಿಸಿದ್ದಾರೆ.

ವಿಳಾಸ: ಅಧ್ಯಕ್ಷರು, ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ, ನಂ. 118, ‘ಹೊಂಬೆಳಕು’, 5ನೇ ಕ್ರಾಸ್, ಒಂದನೇ ಬ್ಲಾಕ್, ಎಚ್.ಎಂ.ಟಿ. ಲೇಔಟ್‌, ನಾಗಸಂದ್ರ ಅಂಚೆ, ಬೆಂಗಳೂರು 560073. ಮಾಹಿತಿಗೆ: 96860 73837, 77603 50244.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.