ಬೆಂಗಳೂರು: ‘ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಂದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿಸುವ ಮೂಲಕ ರಾಜ್ಯದ ವಿಧಾನಮಂಡಲದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ’ ಎಂದು ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ಆರೋಪಿಸಿದ್ದಾರೆ.
‘ಶುಕ್ರವಾರ ನಡೆದ ಕಾರ್ಯಕ್ರಮದ ವೇಳೆ ಲೋಕಸಭೆ ಸ್ಪೀಕರ್ಅವರ ಅಂಗರಕ್ಷಕರು, ಆಪ್ತ ಸಹಾಯಕರು, ಛಾಯಾಗ್ರಾಹಕರೂ ವಿಧಾನಸಭೆಯ ಒಳಕ್ಕೆ ಪ್ರವೇಶಿಸಿದ್ದರು. ವಿಧಾನಸಭೆಯ ನಿಯಮಾವಳಿಗಳನ್ನು ಗಾಳಿಗೆ ತೂರಿ ವರ್ತಿಸಿದ್ದಾರೆ. ಇದು ರಾಜ್ಯದ ವಿಧಾನಮಂಡಲದ ಮೇಲೆ ದೆಹಲಿ ದೊರೆಗಳಿಂದ ನಡೆದ ದಾಳಿ. ಇದಕ್ಕಾಗಿ ವಿಧಾನಸಭೆಯ ಅಧ್ಯಕ್ಷರು ಕ್ಷಮೆ ಯಾಚಿಸಬೇಕು’ ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.