ADVERTISEMENT

ಹೆಡ್‌ ಕಾನ್‌ಸ್ಟೆಬಲ್ ಮೇಲೆ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 20:00 IST
Last Updated 16 ಜನವರಿ 2020, 20:00 IST

ಬೆಂಗಳೂರು: ಬೊಮ್ಮನಹಳ್ಳಿ ಜಂಕ್ಷನ್‌ನಲ್ಲಿ ಕರ್ತವ್ಯ ನಿರತ ಹೆಡ್‌ ಕಾನ್‌ಸ್ಟೆಬಲ್‌ ಜಗದೀಶ್ ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಅವರ ಹಣೆಗೆ ತೀವ್ರ ಪೆಟ್ಟು ಬಿದ್ದಿದೆ.

‘ಮಡಿವಾಳ ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಜಗದೀಶ್ ಅವರನ್ನು ಇದೇ 14ರಂದು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಸಾರ್ವಜನಿಕರ ಓಡಾಟಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ಆಟೊಗಳನ್ನು ಸ್ಥಳದಿಂದ ಕಳುಹಿಸುತ್ತಿದ್ದಾಗಲೇ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ’ ಎಂದು ಬೊಮ್ಮನಹಳ್ಳಿ ಠಾಣೆ ಪೊಲೀಸರು ಹೇಳಿದರು.

‘ಜಗದೀಶ್ ಅವರು ಚಿಕಿತ್ಸೆ ಪಡೆದಿದ್ದಾರೆ. ಅವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.