ADVERTISEMENT

ಜ. 20ಕ್ಕೆ ಬೀದಿಬದಿ ವ್ಯಾಪಾರಿಗಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 4:28 IST
Last Updated 17 ಜನವರಿ 2020, 4:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟವು ಸೋಮವಾರ (ಜ.20) ಬೆಳಿಗ್ಗೆ 10 ಗಂಟೆಗೆ ಪುರಭವನದಲ್ಲಿ ‘ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ’ ಹಮ್ಮಿಕೊಂಡಿದೆ.

ಒಕ್ಕೂಟದ ರಾಜ್ಯಾಧ್ಯಕ್ಷ ಸಿ.ಇ.ರಂಗಸ್ವಾಮಿ ಮಾತನಾಡಿ, ‘ಮೇಯರ್ ಎಂ. ಗೌತಮ್‌ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಕಡೆಯಿಂದ ರಾಜ್ಯದಾದ್ಯಂತ ಬೀದಿ ಬದಿ ವ್ಯಾಪಾರಿಗಳು ಹಾಗೂ ಪಟ್ಟಣ ವ್ಯಾಪಾರ ಸಮಿತಿಗೆ ಚುನಾವಣೆಯಲ್ಲಿ ಆಯ್ಕೆ ಆಗಿರುವವರ ವಿಜಯೋತ್ಸವವು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆಯಲಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಸುಮಾರು 4.40 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಸರ್ಕಾರ 1.60 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿದೆ. ರಾಜ್ಯದ ಎಲ್ಲ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲು ಸಮೀಕ್ಷೆ ನಡೆಸಿ, ಗುರುತಿನ ಚೀಟಿ, ಬಿಸಿಯೂಟ ವಿತರಣೆ, ನಿಗಮ ಮಂಡಳಿ ರಚನೆಗೆ ಒತ್ತಾಯಿಸಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.