ಬೆಂಗಳೂರು: ‘ಕೋವಿಡ್ ಎರಡನೇ ಅಲೆ ಉಲ್ಬಣಗೊಳ್ಳುತ್ತಿದೆ. ಜನರಿಗೆ ಸಮಸ್ಯೆಯಾಗದಂತೆ ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಮುಖ್ಯ. ನಮಗಾಗಿ ನೀವಿದ್ದರೆ, ನಿಮಗೆ ನಾವಿರುತ್ತೇವೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಖಾಸಗಿ ಆಸ್ಪತ್ರೆ ಮುಖ್ಯಸ್ಥರಿಗೆ ತಿಳಿಸಿದರು.
ಕೋವಿಡ್ ನಿಯಂತ್ರಣ ಸಂಬಂಧ ಯಶವಂತಪುರ ವಿಧಾನಸಭಾ ಕ್ಷೇತ್ರದ ಖಾಸಗಿ ಆಸ್ಪತ್ರೆ ಮುಖ್ಯಸ್ಥರ ಸಭೆ ಜೊತೆ ಅವರು ಶನಿವಾರ ಸಭೆ ನಡೆಸಿದರು.
‘ಯಶವಂತಪುರ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ 761 ಹಾಸಿಗೆಗಳಿದ್ದು, ಅವುಗಳಲ್ಲಿ ಪಾಲಿಕೆ ಸುಪರ್ದಿಗೆ 405 ಹಾಸಿಗೆಗಳನ್ನು ಕೊಡಬೇಕಿತ್ತು. ಆದರೆ, ಈವರೆಗೆ 268 ಹಾಸಿಗೆಗಳನ್ನು ಮಾತ್ರ ನೀಡಿರುವುದು ಸರಿಯಲ್ಲ. ಕ್ಷೇತ್ರದಲ್ಲಿಸರ್ಕಾರಿ ಆಸ್ಪತ್ರೆಯಿಲ್ಲ, ಖಾಸಗಿ ಆಸ್ಪತ್ರೆಗಳು ಹೆಚ್ಚಾಗಿ ಇವೆ. ಈಗಿನ ಪರಿಸ್ಥಿತಿಯಿಂದ ಪಾರಾಗಲು ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕು. ಕ್ಷೇತ್ರದಿಂದ ದೂರುಗಳು ಬರುತ್ತಿವೆ. ಎಲ್ಲರೂ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕು’ ಎಂದರು.
ವಲಯ ಆಯುಕ್ತ ರೆಡ್ಡಿ ಶಂಕರ್ ಬಾಬು, ಉಪ ವಿಭಾಗಾಧಿಕಾರಿ ಶಿವಣ್ಣ ಹಾಗೂ ಇತರರು ಸಭೆಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.