ADVERTISEMENT

ವೀಸಾ ಅವಧಿ ವಿಸ್ತರಣೆಗೆ ಸುಡಾನ್ ಪ್ರಜೆ ಕೋರಿಕೆ: ಕೇಂದ್ರ ಸರ್ಕಾರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 0:55 IST
Last Updated 18 ಫೆಬ್ರುವರಿ 2026, 0:55 IST
<div class="paragraphs"><p>ಕರ್ನಾಟಕ ಹೈಕೋರ್ಟ್</p></div>

ಕರ್ನಾಟಕ ಹೈಕೋರ್ಟ್

   

ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಮುಕ್ತಾಯಗೊಂಡ ವೀಸಾ ಅವಧಿ ವಿಸ್ತರಣೆ ಮಾಡುವಂತೆ ಕೋರಿ ಸುಡಾನ್ ಪ್ರಜೆಯೊಬ್ಬರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಸುಡಾನ್​ ಪ್ರಜೆ ಅವಾಬ್​ ಆದಿಲ್​ ಅಹಮದ್​ ಮೊಹಮದ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್​ ಪ್ರಸಾದ್​ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿತು.

ADVERTISEMENT

ಅರ್ಜಿಯಲ್ಲಿ ಏನಿದೆ?: ಅರ್ಜಿದಾರರು ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದು ಇಲ್ಲೇ ನೆಲಸಿದ್ದರು. 2023ರ ಆಗಸ್ಟ್​ 9ರಂದು ವೀಸಾ ಅವಧಿ ಮುಕ್ತಾವಾಗಿದ್ದು, ವಿಸ್ತರಣೆ ಮಾಡಬೇಕು ಎಂದು ಕೋರಿ ವಿದೇಶಿಗರ ಪ್ರಾದೇಶಿಕ ನೋಂದಣಾಧಿಕಾರಿ ಕಚೇರಿಗೆ (ಎಫ್​ಆರ್​ಆರ್​ಒ) 2025ರ ಸೆಪ್ಟೆಂಬರ್ 11ರಂದು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ತಿರಸ್ಕರಿಸಿ ಆನ್‌ಲೈನ್ ಹಿಂಬರಹ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.