ADVERTISEMENT

ಎನ್‌ಎಲ್‌ಎಸ್‌ಐಯು ನೂತನ ಕುಲಪತಿ ಸುಧೀರ ಕೃಷ್ಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 19:33 IST
Last Updated 4 ಆಗಸ್ಟ್ 2019, 19:33 IST
ಸುಧೀರ ಕೃಷ್ಣಸ್ವಾಮಿ
ಸುಧೀರ ಕೃಷ್ಣಸ್ವಾಮಿ   

ಬೆಂಗಳೂರು: ನ್ಯಾಷನಲ್‌ ಲಾ ಸ್ಕೂಲ್ ಆಫ್‌ ಇಂಡಿಯಾ ಯೂನಿವರ್ಸಿಟಿಯ (ಎನ್‌ಎಲ್‌ಎಸ್‌ಐಯು) ನೂತನ ಕುಲಪತಿಯನ್ನಾಗಿ ಪ್ರೊ. ಸುಧೀರ ಕೃಷ್ಣಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ನೇತೃತ್ವದ ಕಾರ್ಯಕಾರಿ ಮಂಡಳಿಯು ಈ ತೀರ್ಮಾನ ಕೈಗೊಂಡಿದೆ. ಹುದ್ದೆಗೆ ಅರ್ಹರನ್ನು ಆಯ್ಕೆ ಮಾಡುವ ಸಂಬಂಧ ಇತ್ತೀಚೆಗೆ ಸಮಿತಿಯೊಂದನ್ನು ರಚಿಸಲಾಗಿತ್ತು.

ಸುಧೀರ ಕೃಷ್ಣಸ್ವಾಮಿ, ಪ್ರೊ. ಶಶಿಕಲಾ ಗುರ್ಪುರ್ ಹಾಗೂ ಪ್ರೊ. ಶ್ರೀಕೃಷ್ಣ ದೇವರಾವ್ ಅವರ ಹೆಸರುಗಳನ್ನು ಸಮಿತಿಯು ಹುದ್ದೆಗೆ ಶಿಫಾರಸು ಮಾಡಿತ್ತು. ಅಂತಿಮವಾಗಿ ಸುಧೀರ್ ಅವರನ್ನು ನೇಮಕ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.