ADVERTISEMENT

ಬೆಂಗಳೂರು: ಕಮಿಷನರ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ವಿಜಯಪುರ ನಿವಾಸಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 2:31 IST
Last Updated 26 ಜುಲೈ 2022, 2:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿ ಎದುರೇ ಸಿದ್ಧರಾಮಗೌಡ ಎಂಬುವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡಿರುವ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

‘ವಿಜಯಪುರ ನಿವಾಸಿ ಸಿದ್ಧರಾಮಗೌಡ ಸೋಮವಾರ ಮಧ್ಯಾಹ್ನ ಕಮಿಷನರ್ ಕಚೇರಿಗೆ ಬಂದಿದ್ದರು. ಪ್ರವೇಶ ದ್ವಾರದಲ್ಲೇ ಏಕಾಏಕಿ ಕ್ರಿಮಿನಾಶಕ ಸೇವಿಸಿ ಕುಸಿದು ಬಿದ್ದಿದ್ದರು. ಅದನ್ನು ನೋಡಿದ್ದ ಸಿಬ್ಬಂದಿ, ಆಟೊದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸಿದ್ಧರಾಮಗೌಡ ಮಗಳಿಗೆ ಪತಿ ವರದಕ್ಷಿಣೆ ಕಿರುಕುಳ ನೀಡಿದ್ದರು. ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತು ಸಿದ್ಧರಾಮಗೌಡ ಕಮಿಷನರ್ ಅವರಿಗೆ ದೂರು ನೀಡಲು ಬಂದಿದ್ದರು. ಅವರ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದೂ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.