ADVERTISEMENT

ಕತ್ತು ಕೊಯ್ದುಕೊಂಡು ಕ್ಯಾಬ್‌ ಚಾಲಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 20:01 IST
Last Updated 20 ಆಗಸ್ಟ್ 2019, 20:01 IST

ಬೆಂಗಳೂರು: ಕ್ಯಾಬ್‌ ಚಾಲಕನೊಬ್ಬ, ತನ್ನ ಕಾರಿನ ಬಾಗಿಲುಗಳನ್ನು ಲಾಕ್‌ ಮಾಡಿ, ಬಳಿಕ ಅದರೊಳಗೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರ್‌. ಎಂ. ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಮಾರುತಿನಗರದಲ್ಲಿ ನಡೆದಿದೆ.

ಅನ್ನಪೂರ್ಣೇಶ್ವರಿ ನಗರದ ನಿವಾಸಿ ಮಂಜುನಾಥ (27) ಆತ್ಮಹತ್ಯೆ ಮಾಡಿಕೊಂಡ ಚಾಲಕ. ‘ಸಾಲ ಮರು
ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಪೊಲೀಸರಿಗೆ ಮಂಜುನಾಥನ ತಂದೆ ಮಾಹಿತಿ ನೀಡಿದ್ದಾರೆ.

‘ದಾರಿಹೋಕರು ನಿಲ್ಲಿಸಿದ್ದ ಕಾರಿನೊಳಗೆ ಮಂಜುನಾಥನ ಮೃತದೇಹವನ್ನು ಮಂಗಳವಾರ ಬೆಳಿಗ್ಗೆ ನೋಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಾಲಕನ ಆಸನದಲ್ಲಿ ಕುಳಿತ ಭಂಗಿಯಲ್ಲಿದ್ದ ವ್ಯಕ್ತಿಯ ಕತ್ತಿನಿಂದ ರಕ್ತ ಸ್ರಾವವಾಗುತ್ತಿದ್ದುದನ್ನು ನೋಡಿದವರು ಮಾಹಿತಿ ನೀಡಿದರು’ ಎಂದು ಪೊಲೀಸರು ತಿಳಿಸಿದರು.

ADVERTISEMENT

ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪೊಲೀಸರು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದರು.

‘ಮಂಜುನಾಥನಿಗೆ ₹ 10 ಲಕ್ಷಕ್ಕೂ ಹೆಚ್ಚು ಸಾಲ ಇತ್ತು. ಅದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ’ ಎಂದು ತಂದೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.