ಬೆಂಗಳೂರು: ಹೊರಮಾವು ಬಳಿ ರೈಲಿಗೆ ತಲೆಕೊಟ್ಟು ಸಹಪಾಠಿಗಳಿಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಿದ್ಯಾರ್ಥಿ ಸಿರೀಶ್ (20) ಹಾಗೂ ವಿದ್ಯಾರ್ಥಿನಿ ಚೈತನ್ಯಾ (19) ಆತ್ಮಹತ್ಯೆ ಮಾಡಿಕೊಂಡವರು. ರೈಲ್ವೆ ಹಳಿ ಮೇಲೆ ಚೆಲ್ಲಾಪಿಲ್ಲಿಯಾಗಿದ್ದ ಅವರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಿ.ವಿ. ರಾಮನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರ ಸಂಬಂಧಿಕರಿಗೂ ಮಾಹಿತಿ ನೀಡಲಾಗಿದೆ’ ಎಂದು ರೈಲ್ವೆ ಪೊಲೀಸ್ ಮೂಲಗಳು ಹೇಳಿವೆ.
‘ಸಿರೀಶ್ ಹಾಗೂ ಚೈತನ್ಯಾ, ನಗರದ ಕಾಲೇಜೊಂದರಲ್ಲಿ ಬಿ.ಸಿ.ಎ ಪದವಿ ವ್ಯಾಸಂಗ ಮಾಡುತ್ತಿದ್ದರು. ಸಹಪಾಠಿಗಳಾಗಿದ್ದ ಇಬ್ಬರ ನಡುವೆ ಸಲುಗೆ ಇತ್ತು. ಹಲವೆಡೆ ಸುತ್ತಾಡುತ್ತಿದ್ದರು. ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರೆಂಬ ಮಾಹಿತಿ ಇದ್ದು, ಖಚಿತವಾಗಿಲ್ಲ’ ಎಂದೂ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.