ADVERTISEMENT

ಆತ್ಮಹತ್ಯೆ; ಫೈನಾನ್ಸ್ ಕಂಪನಿಗಳ ಕಿರುಕುಳ ಆರೋಪ

​ಪ್ರಜಾವಾಣಿ ವಾರ್ತೆ
Published 14 ಜನವರಿ 2021, 16:59 IST
Last Updated 14 ಜನವರಿ 2021, 16:59 IST

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶಶಿಧರ್ (49) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಹೊಂಗಸಂದ್ರ ಬಾಲಾಜಿ ಲೇಔಟ್ ನಿವಾಸಿಯಾದ ಶಶಿಧರ್, ಪತ್ನಿ ಹಾಗೂ ಇಬ್ಬರ ಮಕ್ಕಳ ಜೊತೆ ವಾಸವಿದ್ದರು. ಪ್ರಿಂಟಿಂಗ್ ಪ್ರೆಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್‌ಡೌನ್‌ನಿಂದಾಗಿ ಕೆಲಸ ಹೋಗಿತ್ತು. ಬೇರೆ ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಶಶಿಧರ್, ಫೈನಾನ್ಸ್ ಕಂಪನಿ ಹಾಗೂ ಪರಿಚಯಸ್ಥರ ಬಳಿ ಸಾಲ ಮಾಡಿದ್ದರು. ಮನೆ ನಿರ್ಮಾಣಕ್ಕೂ ಗೃಹ ಸಾಲ ತೆಗೆದುಕೊಂಡಿದ್ದರು. ಕೆಲಸ ಇಲ್ಲದಿದ್ದರಿಂದ ಸಾಲ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಸಾಲ ಮರುಪಾವತಿ ಮಾಡುವಂತೆ ಫೈನಾನ್ಸ್ ಕಂಪನಿ ಪ್ರತಿನಿಧಿಗಳು ಎಚ್ಚರಿಕೆ ನೀಡಿದ್ದರು. ಕಿರುಕುಳವನ್ನೂ ನೀಡುತ್ತಿದ್ದರು. ಅದರಿಂದ ನೊಂದು ಶಶಿಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಗತಿ ಸಂಬಂಧಿಕರು ನೀಡಿರುವ ದೂರಿನಲ್ಲಿದೆ’ ಎಂದೂ ಮೂಲಗಳು ತಿಳಿಸಿವೆ.

ADVERTISEMENT

’ಬುಧವಾರ ರಾತ್ರಿ ಮನೆಯ ಪ್ರತ್ಯೇಕ ಕೊಠಡಿಯಲ್ಲಿ ಮಲಗಿದ್ದ ಶಶಿಧರ್, ಮರುದಿನ ಬೆಳಿಗ್ಗೆ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ಪತ್ನಿ, ಕೊಠಡಿಗೆ ಹೋಗಿ ನೋಡಿದಾಗಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಇತ್ತು. ಸ್ಥಳದಲ್ಲಿ ಮರಣ ಪತ್ರವೂ ಸಿಕ್ಕಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.