ADVERTISEMENT

ಕೆಲಸ ಹುಡುಕಿ ಬೆಂಗಳೂರಿಗೆ ಬಂದವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 16:44 IST
Last Updated 17 ಜೂನ್ 2021, 16:44 IST
ಆತ್ಮಹತ್ಯೆ–ಪ್ರಾತಿನಿಧಿಕ ಚಿತ್ರ
ಆತ್ಮಹತ್ಯೆ–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣ ಸಮೀಪದ ಮರವೊಂದಕ್ಕೆ ನೇಣು ಹಾಕಿಕೊಂಡು ತಿಮ್ಮರಾಜು (29) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಶಿರಾ ತಾಲ್ಲೂಕಿನ ಚನ್ನೇನಹಳ್ಳಿಯ ತಿಮ್ಮರಾಜು, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಆರ್‌ಎಂಸಿ ಯಾರ್ಡ್ ಪೊಲೀಸರು ಹೇಳಿದರು.

‘ಗಾರ್ಮೆಂಟ್ಸ್‌ ಕಾರ್ಖಾನೆಯಲ್ಲಿ ತಿಮ್ಮರಾಜು ಕೆಲಸ ಮಾಡುತ್ತಿದ್ದರು. ಲಾಕ್‌ಡೌನ್‌ನಿಂದಾಗಿ ಕೆಲಸ ಹೋಗಿತ್ತು. ಅವಿವಾಹಿತರಾಗಿದ್ದ ಅವರು, ಕೊಠಡಿಯೊಂದರಲ್ಲಿ ವಾಸವಿದ್ದರು. ಮಾನಸಿಕವಾಗಿ ನೊಂದಿದ್ದರು ಎನ್ನಲಾದ ಅವರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರೊಬ್ಬರು ಗುರುವಾರ ಬೆಳಿಗ್ಗೆ ಮೃತದೇಹ ನೋಡಿ ಠಾಣೆಗೆ ಮಾಹಿತಿ ನೀಡಿದ್ದರು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.