ADVERTISEMENT

ಯಶವಂತಪುರ ಮೇಲ್ಸೇತುವೆ ಬಳಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 17:06 IST
Last Updated 22 ಫೆಬ್ರುವರಿ 2022, 17:06 IST

ಬೆಂಗಳೂರು: ಯಶವಂತಪುರ ಮೇಲ್ಸೇತುವೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡು ಬಾಬು ಎಂಬುವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮರದಲ್ಲಿ ನೇತಾಡುತ್ತಿದ್ದ ಮೃತದೇಹ ನೋಡಿ ಸ್ಥಳೀಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಯಶವಂತಪುರ ಠಾಣೆ ಪೊಲೀಸರು ಹೇಳಿದರು.

‘ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.