ADVERTISEMENT

ಚಿನ್ನಾಭರಣ ದೋಚಿದ ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 20:29 IST
Last Updated 19 ಡಿಸೆಂಬರ್ 2019, 20:29 IST

ಬೆಂಗಳೂರು: ಮಹಿಳೆಯೊಬ್ಬರ ಚಿನ್ನಾಭರಣ ದೋಚಿದ್ದ ಇಬ್ಬರು ದುಷ್ಕರ್ಮಿಗಳನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ನವೀನ್‌ ಗೌಡ (38) ಮತ್ತು ಮಂಜುನಾಥ (35) ಬಂಧಿತರು. ಆರೋಪಿಗಳಿಂದ ₹ 2 ಲಕ್ಷ ಮೌಲ್ಯದ 62 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಕೊರಿಯರ್‌ ಕೊಡುವ ನೆಪದಲ್ಲಿ ಉಷಾ ಬಾಲಕೃಷ್ಣನ್‌ (75) ಎಂಬುವರ ಮನೆಗೆ ಹೋಗಿದ್ದ ನವೀನ್‌ ಗೌಡ, ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಅಪಹರಿಸಿದ್ದ. ಮನೆಯ ಒಳಗೆ ನುಗ್ಗಿದ್ದ ಆರೋಪಿ, ವೃದ್ಧೆಯನ್ನು ಬೆದರಿಸಿ, ಬೀರುವಿನಲ್ಲಿ ಹುಡುಕಾಡಿದ್ದ. ಅಲ್ಲಿ ಏನೂ ಸಿಗದೇ ಇದ್ದಾಗ ಮಹಿಳೆ ಬಳಿ ಇದ್ದ ನಾಲ್ಕು ಚಿನ್ನದ ಬಳೆಗಳು ಮತ್ತು ಕಿವಿಯೋಲೆ ದೋಚಿ ಪರಾರಿಯಾಗಿದ್ದ.

ADVERTISEMENT

ಪ್ರಕರಣ ದಾಖಲಿಸಿಕೊಂಡಿದ್ದ ಕುಮಾರಸ್ವಾಮಿ ಲೇಔಟ್‌ ಪೊಲೀಸರು, ಆರೋಪಿ ನವೀನ್‌ ಗೌಡನನ್ನು ಬಂಧಿಸಿದ್ದರು. ಬಳಿಕ ಆತನಿಗೆ ನೆರವು ನೀಡಿ ಆರೋಪದಲ್ಲಿ ಮಂಜುನಾಥನನ್ನೂ ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.