ADVERTISEMENT

ದೂರವಾಣಿ ಕದ್ದಾಲಿಕೆ: ಸುಮಲತಾ ದೂರು

ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹ ಆರೋಪ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 18:42 IST
Last Updated 25 ಮಾರ್ಚ್ 2019, 18:42 IST
ಸುಮಲತಾ
ಸುಮಲತಾ   

ಬೆಂಗಳೂರು: ‘ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ನನ್ನ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡಿಸುತ್ತಿದ್ದಾರೆ, ಮನೆ ಬಳಿ ಗುಪ್ತಚರ ಪೊಲೀಸರನ್ನು ಬಿಟ್ಟಿದ್ದಾರೆ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

‘ಒಂದೂವರೆ ತಿಂಗಳಿಂದ ಮನೆ ಸುತ್ತ ಕಾನೂನು ಬಾಹಿರವಾಗಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ದೂರವಾಣಿಯ ಕದ್ದಾಲಿಕೆ ಮಾಡಿಸುತ್ತಿದ್ದಾರೆ, ಜೋಪಾನವಾಗಿರಿ ಎಂದು ಅವರ ಪಕ್ಷದವರೇ ನನಗೆ ಮಾಹಿತಿ ನೀಡಿದ್ದಾರೆ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

‘ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ದಿನ ಅನಿಯಮಿತ ವಿದ್ಯುತ್ ಪೂರೈಕೆ ಮಾಡುವಂತೆ ಚೆಸ್ಕಾಂಗೆ ಪತ್ರ ಬರೆದಿರುವ ಸಂಬಂಧವೂ ಆಯೋಗಕ್ಕೆ ದೂರು ನೀಡಿದ್ದೇನೆ. ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯ ಚುನಾವಣಾಧಿಕಾರಿ ನೀಡಿದ್ದಾರೆ’ ಎಂದು ಸಮಲತಾ ಹೇಳಿದರು.

ADVERTISEMENT

ದರ್ಶನ್ ಮತ್ತು ಯಶ್ ನನ್ನ ಕುಟುಂಬ ಸದಸ್ಯರು, ಮುಖ್ಯಮಂತ್ರಿಯ ಹೇಳಿಕೆಗಳಿಗೆ ಹೆದರಿ ನನ್ನ ಪರ ಪ್ರಚಾರಕ್ಕೆ ಬರುವುದನ್ನು ಅವರು ನಿಲ್ಲಿಸುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.