ADVERTISEMENT

ಫಾಸ್ಟ್‌ ಟ್ಯಾಗ್ ಕಡ್ಡಾಯ: ಧರಣಿ

ಸರ್ವಿಸ್ ರಸ್ತೆಗಳನ್ನು ಬಿಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದಕ್ಕೆ ಖಂಡಿನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 21:35 IST
Last Updated 23 ಫೆಬ್ರುವರಿ 2021, 21:35 IST
ಜಯ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು
ಜಯ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು   

ಪೀಣ್ಯ ದಾಸರಹಳ್ಳಿ: ಟೋಲ್‌ಗಳಲ್ಲಿ ಫಾಸ್ಟ್‌ ಟ್ಯಾಗ್‌ ಕಡ್ಡಾಯ ವಿರೋಧಿಸಿ ಹಾಗೂ ಸರ್ವಿಸ್ ರಸ್ತೆಗಳನ್ನು ಬಿಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ 8ನೇ ಮೈಲಿಯ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಂದೆ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಚಂದ್ರಪ್ಪ ಮಾತನಾಡಿ, 'ಸ್ಥಳೀಯ ವಾಹನ ಸವಾರರಿಗೆ ಫಾಸ್ಟ್‌ ಟ್ಯಾಗ್‌ನಿಂದ ವಿನಾಯತಿ ಕೊಡಬೇಕು ಸರ್ವಿಸ್ ರಸ್ತೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗುತ್ತಿದೆ. ಮನವಿಗೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನದಲ್ಲಿ ರಾಜ್ಯದ ಎಲ್ಲ ಟೋಲ್ ಪ್ಲಾಜಾ ಮುಂದೆ ಹೋರಾಟ ನಡೆಸಲಾಗುತ್ತದೆ' ಎಂದು ತಿಳಿಸಿದರು.

ಸಂಘಟನೆಯ ನಗರ ಜಿಲ್ಲಾ ಘಟಕದ ಅಧ್ಯಕ್ಷ ಜೆ. ಶ್ರೀನಿವಾಸ್ ಮಾತನಾಡಿ, ’ ಸಾರ್ವಜನಿಕರಿಂದ ದುಪ್ಪಟ್ಟು ಸುಂಕ ವಸೂಲಿ ಮಾಡುತ್ತಿದ್ದಾರೆ. ನಾಮಫಲಕಗಳಲ್ಲಿ ಸರಿಯಾದ ಮಾಹಿತಿ ಇರುವುದಿಲ್ಲ. ಕಚೇರಿಗಳಲ್ಲಿ ಸರಿಯಾಗಿ ಕನ್ನಡ ಮಾತನಾಡುವರು ಕೂಡ ಇರುವುದಿಲ್ಲ' ಎಂದು ದೂರಿದರು.

ADVERTISEMENT

ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ಡಿ. (ವೆಂಕಿ), ಕ್ಷೇತ್ರ ಅಧ್ಯಕ್ಷ ವಿಜಯಕುಮಾರ್, ರಾಜ್ಯ ಸಂಚಾಲಕ ಪ್ರಕಾಶ್ ಗೌಡ, ರಾಜ್ಯ ಉಪಾಧ್ಯಕ್ಷ ಉದಯ ಶೆಟ್ಟಿ, ಕ್ಷೇತ್ರದ ಕಾರ್ಯದರ್ಶಿ ಮಧು ಗೌಡ, ಯೋಗೇಶ್ ಬಾಬು, ಜಯರಾಮ್, ಶಾರದಾ ಸಿಂಗ್, ರೇಖಾ ಮುಂತಾದವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.